BBMP
Loading ...

State Govt

Greater Bengaluru News9 : ಆರಂಭಿಕ ಪ್ರಮಾಣ ಪತ್ರ (CC) ಮತ್ತು ಸ್ವಾಧೀನ ಪ್ರಮಾಣ ಪತ್ರ (OC) ಇಲ್ಲದ ಕಟ್ಟಡಗಳಿಗೆ ನೀರು, ವಿದ್ಯುತ್ ಸಂಪರ್ಕ ನೀಡುವಲ್ಲಿನ ಸಮಸ್ಯೆ ಬಗೆಹರಿಸಲು ಕಾನೂನು ತಿದ್ದುಪಡಿ ತರುವ ಪ್ರಸ್ತಾವನೆಯನ್ನು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಯಿತು. ಆದರೆ, ಸುಪ್ರೀಂ ಕೋರ್ಟ್ ಆದೇಶ ಮತ್ತು ಕಾನೂನು ತಜ್ಞರ ಸಲಹೆ ಅಗತ್ಯವಿರುವುದರಿಂದ ಈ ನಿರ್ಧಾರವನ್ನು ಮುಂದೂಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ‘ ಕರ್ನಾಟಕ ಕಟ್ಟಡಗಳ ನಿಯಮಾವಳಿ ಉಲ್ಲಂಘನೆ ಸಕ್ರಮೀಕರಣ ಸುಗ್ರೀವಾಜ್ಞೆ’ಯ ಕರಡು ಪ್ರತಿಯನ್ನು ಹಂಚಲಾಯಿತು.

ಈ ವಿಷಯದಲ್ಲಿ ಸುಪ್ರೀಂ ಕೋರ್ಟ್ ಆದೇಶ ಸ್ಪಷ್ಟವಾಗಿರುವುದರಿಂದ, ತಾಂತ್ರಿಕ ಹಾಗೂ ಕಾನೂನಾತ್ಮಕ ಸಮಸ್ಯೆಗಳು ಎದುರಾಗದಂತೆ ಎಚ್ಚರಿಕೆ ವಹಿಸಬೇಕೆಂದು ತೀರ್ಮಾನವನ್ನು ಮುಂದೂಡಲಾಗಿದೆ. ನ್ಯಾಯಾಂಗ ನಿಂದನೆ ಆಗದಂತೆ ಕಾನೂನು ತಜ್ಞರೊಂದಿಗೆ ಮತ್ತೊಮ್ಮೆ ಸಮಾಲೋಚಿಸಿ ಮುಂದಿನ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲು ಸಿಎಂ ಸಿದ್ದರಾಮಯ್ಯ ಬಯಸಿದ್ದಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ ಒಂದು ಸಲದ ಕ್ರಮವಾಗಿ ಕಾನೂನು ರೂಪಿಸುವ ಬಗ್ಗೆ ಬುಧವಾರವೂ ಸಿಎಂ ಅಧ್ಯಕ್ಷತೆಯಲ್ಲಿ ಸಭೆ ನಡೆದಿತ್ತು.

ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಈ ಸಮಸ್ಯೆ ಇದೆ. CC ಮತ್ತು OC ಇಲ್ಲದ ಕಟ್ಟಡಗಳಿಗೆ ನೀರು, ವಿದ್ಯುತ್ ಸಂಪರ್ಕ ನೀಡಲು ಇರುವ ತೊಡಕು ನಿವಾರಿಸುವುದು ಸರ್ಕಾರದ ಉದ್ದೇಶವಾಗಿದೆ. ಆದರೆ, ಕಾನೂನುಬದ್ಧವಾಗಿ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುವುದು ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಕಾನೂನು ತಜ್ಞರ ಅಭಿಪ್ರಾಯ ಪಡೆಯುವುದು ಅನಿವಾರ್ಯವಾಗಿದೆ.

Leave a Reply

Your email address will not be published. Required fields are marked *