Greater bengaluru news9: ಸಾಹಸ ಸಿಂಹ ದಿ.ವಿಷ್ಣುವರ್ಧನ್ ಅವರಿಗೆ ಹಾಗೂ ಅಭಿನಯ ಸರಸ್ವತಿ ದಿ.ನಟಿ ಬಿ.ಸರೋಜಾ ದೇವಿ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗುವುದು ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಘೋಷಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಹೆಚ್.ಕೆ.ಪಾಟೀಲ್, ನಟ ವಿಷ್ಣು ವರ್ಧನ್ ಅವರಿಗೆ ಹಾಗೂ ನಟಿ ಬಿ,ಸರೋಜಾದೇವಿ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದರು.
ಇದೇ ವೇಳೆ ರಾಷ್ಟ್ರಕವಿ ಕುವೆಂಪು ಅವರಿಗೆ ಮರಣೋತ್ತರ ಭಾರತ ರತ್ನ ನೀಡಲು ಶಿಫಾರಸು ಮಾಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ತಿಳಿಸಿದರು.


